|
ಉಡುಪಿಯಿದು,
ಉಡುಪಿಯಿದು... ಶ್ರೀಕೃಷ್ಣನು ನೆಲೆಸಿಹ ಉಡುಪಿಯಿದು *ಟಿ.ಎಂ.ಸತೀಶ್
ಉಡುಪಿ ಇಂದು ವಿಶ್ವವಿಖ್ಯಾತವಾದದ್ದೇ ಇಲ್ಲಿನ ಶ್ರೀಕೃಷ್ಣ ಮಂದಿರದಿಂದ. ಬಹು ಪ್ರಾಚೀನವೂ, ಪುರಾಣ ಪ್ರಸಿದ್ಧವೂ ಆದ ಈ ದೇಗಲುದಲ್ಲಿ ಶ್ರೀಕೃಷ್ಣ ಪರಮಾತ್ಮ ಹಿಂದು ಮುಂದಾಗಿ ನಿಂತಿದ್ದಾನೆ. ಸ್ವರ್ಣಾಭರಣಗಳಿಂದ ಅಲಂಕೃತನಾದ ಕಡಗೋಲು ಕೃಷ್ಣನ ಸೊಬಗನ್ನು ಸವಿಯುವುದೇ ಒಂದು ಆನಂದ. ಭಾರತದ ಏಳು ಪ್ರಮುಖ ಯಾತ್ರಾಸ್ಥಳಗಳ ಪೈಕಿ ಉಡುಪಿಯೂ ಒಂದು. ಪುರಾಣ ಪ್ರಸಿದ್ಧವಾದ ಉಡುಪಿ, ಕನಕದಾಸರಿಂದಾಗಿ ಇತಿಹಾಸ ಪ್ರಸಿದ್ಧಿ ಪಡೆದಿದೆ. ಈ ಪವಿತ್ರ ಪುಣ್ಯಕ್ಷೇತ್ರದಲ್ಲಿ ಶ್ರೀಕೃಷ್ಣನ ದರ್ಶನಭಾಗ್ಯಕ್ಕಾಗಿ ವರ್ಷದ ಎಲ್ಲ ಕಾಲದಲ್ಲೂ ಭಕ್ತರು ಆಗಮಿಸುತ್ತಾರೆ. ಭಗವಂತನನ್ನು ಮುಖ್ಯದ್ವಾರದ ಬದಲಿದೆ, ಹಿಂಬದಿಯ ಪುಟ್ಟ ನವರಂದ್ರದ ಕಿಟಕಿಯ ಮೂಲಕ ನೋಡಿ, ಕೃಷ್ಣನ ಸೊಬಗನ್ನು ಕಣ್ಮು ತುಂಬಿಕೊಂಡು ಅಮಿಮಾನಂದ ಪಡುತ್ತಾರೆ. ಈ ಕಿಟಕಿಗೆ ನವರಂಗ ಕಿಟಕಿ, ಕನಕನ ಕಿಂಡಿ ಎಂಬ ಹೆಸರುಗಳುಂಟು. ಬೆಂಗಳೂರಿನಿಂದ 425 ಕಿ. ಮಿ. ದೂರದಲ್ಲಿ ರುವ ಉಡುಪಿ ಮಧ್ವಾಚಾರ್ಯರ ಪಾದಧೂಳಿನಿಂದ ಪುನೀತವಾದ ಉಡುಪಿ, ವೇದ ಶಿಕ್ಷಣ ನೀಡುವ ಪ್ರಸಿದ್ಧ ಶಿಕ್ಷಣಕೇಂದ್ರವೂ ಹೌದು. ಕೃಷ್ಣ ಮಠದ ಸುತ್ತ ವಿಶಾಲವಾದ ರಾಜಾಂಗಣವಿದೆ. ಇಲ್ಲಿ ಒಂದು ದೀರ್ಘ ಸುತ್ತು ಹಾಕಿದೆವೆಂದರೆ ನಮಗೆ ಶ್ರೀಮಧ್ವಾಚಾರ್ಯ ಸ್ಥಾಪಿತ ಅಷ್ಟ ಮಠಗಳ ದರ್ಶನವೂ ಆಗುತ್ತದೆ. ರಾಜಾಂಗಣ ಪ್ರವೇಶಿಸುತ್ತಿದ್ದಂತೆಯೇ ಕನಕನ ಕಿಂಡಿ ಭಕ್ತರ - ಪ್ರವಾಸಿಗರ ಗಮನ ಸೆಳೆಯುತ್ತದೆ. ತುಸು ದೂರದಲ್ಲೇ ಪವಿತ್ರ ಮಧ್ವ ಸರೋವರ ಇದೆ.
ಉಡುಪಿಯಲ್ಲಿರುವ
ಶ್ರೀಕೃಷ್ಣನ ವಿಗ್ರಹ ಅಲ್ಲಿಗೆ ಬಂದ ಬಗ್ಗೆಯೂ ಒಂದು ಕಥೆ ಇದೆ. ಹಿಂದೆ
ದ್ವಾರಕಾನಗರದಲ್ಲಿ ಇದ್ದ ಶ್ರೀಕೃಷ್ಣನ
ಪರ್ಯಾಯ : ಶ್ರೀ ಕೃಷ್ಣ ವಿಗ್ರಹವನ್ನು ಮಧ್ವಾಚಾರ್ಯರ ಶಿಷ್ಯರು ಮಾತ್ರ ಮುಟ್ಟಬಹುದು. ಕೃಷ್ಣ ಮಠದ ಸುತ್ತ ಎಂಟು ಮಠಗಳಿವೆ. ಈ ಮಠಗಳ ಮಠಾಶರು ಮಾತ್ರ ವಿಗ್ರಹವನ್ನು ಮುಟ್ಟಬಹುದು. ಪೂಜೆ ಮಾಡಬಹುದು. ಅನ್ಯರಿಗೆ ವಿಗ್ರಹವನ್ನು ಸ್ಪರ್ಶಿಸಲು ಅವಕಾಶವಿಲ್ಲ. ಪ್ರತಿಯೊಂದು ಮಠದವರೂ ಸರತಿಯ ಪ್ರಕಾರ ಎರಡು ವರ್ಷ ಪೂಜೆ ಮಾಡುತ್ತಾರೆ. ಒಂದು ಮಠದ ಪೂಜಾಕಾರದ ಅವ ಮುಗಿದಾಗ ಇದನ್ನು ಮತ್ತೊಂದು ಮಠಕ್ಕೆ ವರ್ಗಾಯಿಸಲಾಗುತ್ತದೆ. ಈ ಅಕಾರ ಹಸ್ತಾಂತರ ಕಾರ್ಯಕ್ರಮಕ್ಕೆ ಪರ್ಯಾಯ ಎಂದು ಕರೆಯುತ್ತಾರೆ. ಉಡುಪಿ ಪರ್ಯಾಯ ಉಡುಪಿಯಲ್ಲಿ ಜರುಗುವ ಎಲ್ಲ ಉತ್ಸವ , ಹಬ್ಬಗಳಿಗೆ ಕಿರೀಟಪ್ರಾಯ. ಇಲ್ಲಿ ಪ್ರತಿ ವರ್ಷ ಸಂಕ್ರಾಂತಿಯಂದು ಜಾತ್ರೆ ನಡೆಯುತ್ತದೆ. ಈ ಸಂದರ್ಭದಲ್ಲಿ ಕೃಷ್ಣನಿಗೆ ವಜ್ರಕಿರೀಟಧಾರಣೆ ನಡೆಯುತ್ತದೆ. ಜಾತ್ರೆ, ಆಯನಗಳ ಸಂದರ್ಭದಲ್ಲಿ ಶ್ರೀಕೃಷ್ಣ ದೇವಾಲಯದಲ್ಲಿರುವ ಚಿನ್ನದ ರಥ ಎಳೆಯುತ್ತಾರೆ.
ಉಡುಪಿಗೆ ಹೋಗಬೇಕೆಂದಿದ್ದೀರಾ ? ಬೆಂಗಳೂರಿನಿಂದ ಕುಂದಾಪುರಕ್ಕೆ ಹೋಗುವ ಎಲ್ಲ ಬಸ್ಸುಗಳೂ ಉಡುಪಿ ನಗರಕ್ಕೆ ಹೋಗುತ್ತವೆ. ಬೆಂಗಳೂರಿನಿಂದ ಉಡುಪಿಗೆ ರಸ್ತೆ ಮಾರ್ಗದಲ್ಲಿ ಸುಮಾರು ೯ ಗಂಟೆಗಳ ಪ್ರಯಾಣ. ಉಡುಪಿಯ ಬಸ್ ನಿಲ್ದಾಣದಿಂದ ದೇವಸ್ಥಾನಕ್ಕೆ ಒಂದು ಕಿಲೋ ಮೀಟರ್ಗಿಂತ ಹೆಚ್ಚು ದೂರವಿಲ್ಲ. ಉಡುಪಿಯ ಸುತ್ತಮುತ್ತ ಇರುವ ಮರವಂತೆ, ಮಲ್ಪೆ ಬೀಚ್ಗಳು, ಸೈಂಟ್ ಮೇರಿಸ್ ದ್ವೀಪ, ಕೊಲ್ಲೂರು, ಸೌಪರ್ಣಿಕಾ ನದಿಯ ಸಮುದ್ರ ಸೇರುವ ಸಂಗಮ ಸ್ಥಳವೇ ಮೊದಲಾದ ಪ್ರೇಕ್ಷಣೀಯ ಸ್ಥಳಗಳೂ ಉಡುಪಿಯ ಪ್ರವಾಸೋದ್ಯಮಕ್ಕೆ ನೆರವಾಗಿವೆ. ಸಂಪರ್ಕ: ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ಖನಿಜ ಭವನ, ರೇಸ್ಕೋರ್ಸ್ ರಸ್ತೆ, ಬೆಂಗಳೂರು. ದೂರವಾಣಿ :080-22352901 /22352909 /22352903 Email : kstdc@vsnl.in |
![]() ![]() |
||